ಸ್ವಾತಂತ್ರ್ಯ ದಿನದ ತಡವಾದ ಶುಭಾಶಯಗಳು. ಅಗಸ್ಟ್ ೧೬ರ ಈ #ದನಿಪಯಣ ಸಂಚಿಕೆಯಲ್ಲಿ ಗಂಡುಮೆಟ್ಟಿನ ನೆಲ ಹುಬ್ಬಳ್ಳಿಯಲ್ಲಿನ ಸ್ವಾತಂತ್ರ್ಯ ಸಮರದ ನೆನಪುಗಳ ಬಗ್ಗೆ ಮಾತನಾಡುತ್ತ ನಡೆಯಲಿದ್ದೇವೆ. 

🔶 ಹುಬ್ಬಳ್ಳಿಯನ್ನು ಕರ್ಮಭೂಮಿಯಾಗಿಸಿಕೊಂಡಿದ್ದ ಧೈರ್ಯಶಾಲಿ ಮಹಿಳೆ ಶ್ರೀಮತಿ ಉಮಾಬಾಯಿ ಕುಂದಾಪುರರು ಭಗಿನಿ ಮಂಡಳದ ಮೂಲಕ ಸ್ವಾತಂತ್ರ್ಯದ ಸ್ವಯಂಸೇವಕಿಯರನ್ನು ಸಜ್ಜುಗೊಳಿಸುತಿದ್ದರು.

🔷 ನಿಮಗೆ ಗೊತ್ತಾ ? ಈಗ ಹುಬ್ಬಳ್ಳಿ-ಬೆಂಗಳೂರಿನಲ್ಲಿ ಮುಖ್ಯ ನೆಲೆ ಕಂಡುಕೊಂಡಿರುವ 'ಸಂಯುಕ್ತ ಕರ್ನಾಟಕ' ಶುರುವಾಗಿದ್ದು ಬೆಳಗಾವಿಯಲ್ಲಿ, ಅದೂ ವಾರಪತ್ರಿಕೆಯಾಗಿ..

🔶 ಧಾರವಾಡದ ವಿದ್ಯಾರಣ್ಯ ಶಾಲೆಯಲ್ಲಿ ಸಹೋದ್ಯೋಗಿಗಳಾಗಿದ್ದ ಸರ್ವಶ್ರೀ ರಂಗನಾಥ ದಿವಾಕರ, ಮಧ್ವರಾವ್ ಕಬ್ಬೂರ ಮತ್ತು ರಾಮರಾವ ಹುಕ್ಕೇರಿಕರರು ಶುರುಮಾಡಿದ್ದ "ಕರ್ಮವೀರ" ಪತ್ರಿಕೆಗೆ ಆ ಹೆಸರು ಕೊಡಲು ಕಾರಣವೇನು ಗೊತ್ತಾ?

🔷 ಬಡತನದಲ್ಲಿಯೇ ಹುಟ್ಟಿ, ಕಷ್ಟ ಪಟ್ಟು ಬೆಳದ ಸರ್ ಸಿದ್ದಪ್ಪ ಕಂಬಳಿಯವರು ಅಂದಿನ ಬಾಂಬೆ ಸರಕಾರದಲ್ಲಿ ಶಿಕ್ಷಣ, ಕೃಷಿ, ಅಬಕಾರಿ ಸಚಿವರಾಗಿ ದುಡಿದವರು. ಅಂದಿನ ಬಹುತೇಕ ನಾಯಕರಂತೆ ಗಾಂಧಿ ಬೆಂಬಲಿಗರಾಗದೇ , ಕಾಂಗ್ರೆಸ್‌ಗೆ ಸ್ಪರ್ಧಿಯಾಗಿದ್ದವರು.

🔶 ಹಿಂದುಸ್ಥಾನ ಸೇವಾದಳವನ್ನು ಸ್ಥಾಪಿಸಿದ ಡಾ.ನಾ.ಸು.ಹರ್ಡಿಕರರು ಹುಬ್ಬಳ್ಳಿಯವರು. ದಳದ ಕೇಂದ್ರ ಕಚೇರಿ ಹುಬ್ಬಳ್ಳಿಯೇ ಆಗಿತ್ತು.

🔷 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಹದಿಮೂರು ವರ್ಷದ ಬಾಲಕ ನಾರಾಯಣ ಡೋಣಿ ಹುಬ್ಬಳ್ಳಿಯಲ್ಲಿ ಹುತಾತ್ಮನಾಗಿದ್ದ.

ಈ ಎಲ್ಲಾ ವಿಷಯಗಳನ್ನು ನಮ್ಮ #ದನಿಪಯಣ ದ ಈ ಸಂಚಿಕೆಯಲ್ಲಿ ಕೇಳಿ.
ಈ ಸಂಚಿಕೆಯಲ್ಲಿ ನಾವು ಉಪಯೋಗಿಸಿದ ಹಾದಿ, ಕಂಡ ದೃಶ್ಯಗಳ ಚಿತ್ರಗಳು ಈ ಬ್ಲಾಗಿನಲ್ಲಿವೆ : http://antarangada-mrudanga.blogspot.com/2020/09/blog-post.html

 

ನಿಮಗೆ ಗೊತ್ತಿರೊ ಹಾಗೆ : *ದನಿಪಯಣ* ಪಾಡ್‌ಕಾಸ್ಟ್‌ ಕಾರ್ಯಕ್ರಮದ ಉದ್ದೇಶ ಶಾಲೆಯಲ್ಲಿ ಕಲಿಸದ, ಪಠ್ಯ ಪುಸ್ತಕಗಳಲ್ಲಿ ಇರದ ನಮ್ಮ ಊರು-ನಾಡುಗಳ ಕತೆ-ಇತಿಹಾಸ ತಿಳಿದುಕೊಳ್ಳೋದು ಮತ್ತು ಮಕ್ಕಳಿಗೆ ತಿಳಿಸುವುದು.
ಈ ಪಾಡ್‌ಕಾಸ್ಟ್‌ ಸಂಚಿಕೆಗಳು ರೇಡಿಯೋ-ಗಿರ್ಮಿಟ್ನಲ್ಲಿ (radiogirmit.com) ಎರಡು ವಾರಕ್ಕೊಮ್ಮೆಯಂತೆ ಗುರುವಾರ ಪ್ರಸಾರ ಆಗುತ್ತವೆ.

ದನಿಪಯಣ ದ ಹಿಂದಿನ ಸಂಚಿಕೆಗಳು ಗೂಗಲ್‌ಪಾಡ್‌ಕಾಸ್ಟ್ ನಲ್ಲಿ ಲಭ್ಯವಿವೆ: https://www.google.com/podcasts?feed=aHR0cHM6Ly9hbmNob3IuZm0vcy8xMTAwMTAyMC9wb2RjYXN0L3Jzcw== 

ನಮ್ಮ ದನಿಪಯಣದ ಸಂಚಿಕೆಗಳನ್ನು ಇತರ ಆಸಕ್ತರಿಗೆ ಫಾರ್ವರ್ಡ್ ಮಾಡಿ. 

ನಿಮಗೆ ಕೇಳಲು ಆಸಕ್ತಿ ಇಲ್ಲವಾದರೆ, ದಯವಿಟ್ಟು ತಿಳಿಸಿ. ಮುಂದಿನ ಸಂಚಿಕೆಯಿಂದ ತೊಂದರೆ ಕೊಡೋದಿಲ್ಲ🙏

ಅನಿಮಿಷ ಮತ್ತು ಗುರುರಾಜ ಕುಲಕರ್ಣಿ

ದನಿಪಯಣ

Gururaj Kulkarni

ದನಿಪಯಣದಲ್ಲಿ ಹುಬ್ಬಳ್ಳಿಯ ಸ್ವಾತಂತ್ರ್ಯ ಸಮರ

SEP 6, 202036 MIN
ದನಿಪಯಣ

ದನಿಪಯಣದಲ್ಲಿ ಹುಬ್ಬಳ್ಳಿಯ ಸ್ವಾತಂತ್ರ್ಯ ಸಮರ

SEP 6, 202036 MIN

Description

ಸ್ವಾತಂತ್ರ್ಯ ದಿನದ ತಡವಾದ ಶುಭಾಶಯಗಳು. ಅಗಸ್ಟ್ ೧೬ರ ಈ #ದನಿಪಯಣ ಸಂಚಿಕೆಯಲ್ಲಿ ಗಂಡುಮೆಟ್ಟಿನ ನೆಲ ಹುಬ್ಬಳ್ಳಿಯಲ್ಲಿನ ಸ್ವಾತಂತ್ರ್ಯ ಸಮರದ ನೆನಪುಗಳ ಬಗ್ಗೆ ಮಾತನಾಡುತ್ತ ನಡೆಯಲಿದ್ದೇವೆ. 🔶 ಹುಬ್ಬಳ್ಳಿಯನ್ನು ಕರ್ಮಭೂಮಿಯಾಗಿಸಿಕೊಂಡಿದ್ದ ಧೈರ್ಯಶಾಲಿ ಮಹಿಳೆ ಶ್ರೀಮತಿ ಉಮಾಬಾಯಿ ಕುಂದಾಪುರರು ಭಗಿನಿ ಮಂಡಳದ ಮೂಲಕ ಸ್ವಾತಂತ್ರ್ಯದ ಸ್ವಯಂಸೇವಕಿಯರನ್ನು ಸಜ್ಜುಗೊಳಿಸುತಿದ್ದರು. 🔷 ನಿಮಗೆ ಗೊತ್ತಾ ? ಈಗ ಹುಬ್ಬಳ್ಳಿ-ಬೆಂಗಳೂರಿನಲ್ಲಿ ಮುಖ್ಯ ನೆಲೆ ಕಂಡುಕೊಂಡಿರುವ 'ಸಂಯುಕ್ತ ಕರ್ನಾಟಕ' ಶುರುವಾಗಿದ್ದು ಬೆಳಗಾವಿಯಲ್ಲಿ, ಅದೂ ವಾರಪತ್ರಿಕೆಯಾಗಿ.. 🔶 ಧಾರವಾಡದ ವಿದ್ಯಾರಣ್ಯ ಶಾಲೆಯಲ್ಲಿ ಸಹೋದ್ಯೋಗಿಗಳಾಗಿದ್ದ ಸರ್ವಶ್ರೀ ರಂಗನಾಥ ದಿವಾಕರ, ಮಧ್ವರಾವ್ ಕಬ್ಬೂರ ಮತ್ತು ರಾಮರಾವ ಹುಕ್ಕೇರಿಕರರು ಶುರುಮಾಡಿದ್ದ "ಕರ್ಮವೀರ" ಪತ್ರಿಕೆಗೆ ಆ ಹೆಸರು ಕೊಡಲು ಕಾರಣವೇನು ಗೊತ್ತಾ? 🔷 ಬಡತನದಲ್ಲಿಯೇ ಹುಟ್ಟಿ, ಕಷ್ಟ ಪಟ್ಟು ಬೆಳದ ಸರ್ ಸಿದ್ದಪ್ಪ ಕಂಬಳಿಯವರು ಅಂದಿನ ಬಾಂಬೆ ಸರಕಾರದಲ್ಲಿ ಶಿಕ್ಷಣ, ಕೃಷಿ, ಅಬಕಾರಿ ಸಚಿವರಾಗಿ ದುಡಿದವರು. ಅಂದಿನ ಬಹುತೇಕ ನಾಯಕರಂತೆ ಗಾಂಧಿ ಬೆಂಬಲಿಗರಾಗದೇ , ಕಾಂಗ್ರೆಸ್‌ಗೆ ಸ್ಪರ್ಧಿಯಾಗಿದ್ದವರು. 🔶 ಹಿಂದುಸ್ಥಾನ ಸೇವಾದಳವನ್ನು ಸ್ಥಾಪಿಸಿದ ಡಾ.ನಾ.ಸು.ಹರ್ಡಿಕರರು ಹುಬ್ಬಳ್ಳಿಯವರು. ದಳದ ಕೇಂದ್ರ ಕಚೇರಿ ಹುಬ್ಬಳ್ಳಿಯೇ ಆಗಿತ್ತು. 🔷 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಹದಿಮೂರು ವರ್ಷದ ಬಾಲಕ ನಾರಾಯಣ ಡೋಣಿ ಹುಬ್ಬಳ್ಳಿಯಲ್ಲಿ ಹುತಾತ್ಮನಾಗಿದ್ದ. ಈ ಎಲ್ಲಾ ವಿಷಯಗಳನ್ನು ನಮ್ಮ #ದನಿಪಯಣ ದ ಈ ಸಂಚಿಕೆಯಲ್ಲಿ ಕೇಳಿ. ಈ ಸಂಚಿಕೆಯಲ್ಲಿ ನಾವು ಉಪಯೋಗಿಸಿದ ಹಾದಿ, ಕಂಡ ದೃಶ್ಯಗಳ ಚಿತ್ರಗಳು ಈ ಬ್ಲಾಗಿನಲ್ಲಿವೆ : http://antarangada-mrudanga.blogspot.com/2020/09/blog-post.html ನಿಮಗೆ ಗೊತ್ತಿರೊ ಹಾಗೆ : *ದನಿಪಯಣ* ಪಾಡ್‌ಕಾಸ್ಟ್‌ ಕಾರ್ಯಕ್ರಮದ ಉದ್ದೇಶ ಶಾಲೆಯಲ್ಲಿ ಕಲಿಸದ, ಪಠ್ಯ ಪುಸ್ತಕಗಳಲ್ಲಿ ಇರದ ನಮ್ಮ ಊರು-ನಾಡುಗಳ ಕತೆ-ಇತಿಹಾಸ ತಿಳಿದುಕೊಳ್ಳೋದು ಮತ್ತು ಮಕ್ಕಳಿಗೆ ತಿಳಿಸುವುದು. ಈ ಪಾಡ್‌ಕಾಸ್ಟ್‌ ಸಂಚಿಕೆಗಳು ರೇಡಿಯೋ-ಗಿರ್ಮಿಟ್ನಲ್ಲಿ (radiogirmit.com) ಎರಡು ವಾರಕ್ಕೊಮ್ಮೆಯಂತೆ ಗುರುವಾರ ಪ್ರಸಾರ ಆಗುತ್ತವೆ. ದನಿಪಯಣ ದ ಹಿಂದಿನ ಸಂಚಿಕೆಗಳು ಗೂಗಲ್‌ಪಾಡ್‌ಕಾಸ್ಟ್ ನಲ್ಲಿ ಲಭ್ಯವಿವೆ: https://www.google.com/podcasts?feed=aHR0cHM6Ly9hbmNob3IuZm0vcy8xMTAwMTAyMC9wb2RjYXN0L3Jzcw== ನಮ್ಮ ದನಿಪಯಣದ ಸಂಚಿಕೆಗಳನ್ನು ಇತರ ಆಸಕ್ತರಿಗೆ ಫಾರ್ವರ್ಡ್ ಮಾಡಿ. ನಿಮಗೆ ಕೇಳಲು ಆಸಕ್ತಿ ಇಲ್ಲವಾದರೆ, ದಯವಿಟ್ಟು ತಿಳಿಸಿ. ಮುಂದಿನ ಸಂಚಿಕೆಯಿಂದ ತೊಂದರೆ ಕೊಡೋದಿಲ್ಲ🙏 ಅನಿಮಿಷ ಮತ್ತು ಗುರುರಾಜ ಕುಲಕರ್ಣಿ